ಪ್ರಕರಣವೇನು?: ‘ಆರ್.ಅಶೋಕ್, 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ ಹುಕುಂ ಭೂ ಸಕ್ರಮೀಕರಣ ಸಮಿತಿ ಅಧ್ಯಕ್ಷರಾಗಿದ್ದರು. ಈ ಸಮಯದಲ್ಲಿ ಅವರು ಅನರ್ಹ ಫಲಾನುಭವಿಗಳಿಗೆ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಲು ಸಹಕರಿಸಿದ್ದಾರೆ’ ಎಂದು ಆರೋಪಿಸಿ ಎ.ಆನಂದ ಎಂಬುವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.