ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕಾಲುವೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಭೇಟಿ

Last Updated 28 ಮಾರ್ಚ್ 2018, 11:14 IST
ಅಕ್ಷರ ಗಾತ್ರ

ಬೀದರ್‌: ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ನಗರದ ಪುರಾತನ ಭೂಕಾಲುವೆಗೆ ಭೇಟಿ ನೀಡಿದರು. ಭೂಕಾಲುವೆ ಕಾಮಗಾರಿಗೆ ಸಂಬಂಧಿಸಿದ ಅಂದಾಜು ಪಟ್ಟಿ ಮತ್ತು ಛಾಯಾಚಿತ್ರಗಳನ್ನು ಪರಿಶೀಲಿಸಿದರು.

‘₹3 ಕೋಟಿ ವೆಚ್ಚದ ಅಂದಾಜು ಪಟ್ಟಿ ಪಡೆದು ಈಗಾಗಲೇ ಎರಡು ಬಾರಿ ಟೆಂಡರ್ ಕರೆಯಲಾಗಿದೆ. ಆದರೆ, ಯಾವುದೇ ಅರ್ಜಿಗಳು ಬಂದಿಲ್ಲ. ಈ ಬಗೆಗೆ ನಿರ್ದೇಶನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

‘ಭೂಕಾಲುವೆ ಕಾಮಗಾರಿ ಪೂರ್ಣಗೊಂಡರೆ ನೀರಿನ ಅನುಕೂಲವಾಗಲಿದೆ. ಭೂಕಾಲುವೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಸುತ್ತಮುತ್ತಲಿನ ಪ್ರದೇಶವನ್ನು ಕಾಪಾಡಬೇಕು’ ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂಖಾನ್‌ ಸೂಚನೆ ನೀಡಿದರು.

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ್ ಇದ್ದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ವಸಂತ ನಗರದ ಚರ್ಚ್‌ಗೂ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT