ಗುರುವಾರದಿಂದ ಭಾನುವಾರದವರೆಗೆ ಕೇಂದ್ರ ಸರ್ಕಾರದ ಕಚೇರಿಗಳಿಗೆ ರಜಾದಿನಗಳಾಗಿವೆ. ಆದರೆ, ಶನಿವಾರ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ. ಅಂದು ಮಧ್ಯಾಹ್ನ ಮೂರುಗಂಟೆಯೊಳಗೆ ಡಿಒಪಿಟಿಯಿಂದ ಯಾವುದೇ ನಿರ್ದೇಶನ ಬರದಿದ್ದರೆ ರತ್ನಪ್ರಭಾ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ಗೆ ಪ್ರಭಾರ ಜವಾಬ್ದಾರಿಯನ್ನು ವಹಿಸಿ, ಕರ್ತವ್ಯದಿಂದ ನಿರ್ಗಮಿಸಬೇಕಾಗುತ್ತದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.