ಶಾಸಕರು ಇದೇ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡದ ಗುದ್ದಲಿಪೂಜೆ ನೆರವೇರಿಸಿದರು. ಹಸಿವು ಮುಕ್ತ ಕರ್ನಾಟಕ ರೂಪಿಸುವ ನಿಟ್ಟಿನಲ್ಲಿ ರಿಯಾಯತಿ ದರದಲ್ಲಿ ಊಟ- ಉಪಹಾರ ನೀಡುವ ಇಂದಿರಾ ಕ್ಯಾಂಟೀನ್ ಯೋಜನೆ ಪ್ರಾರಂಭಿಸಲಾಗಿದೆ. ಬಡ ಜನರಿಗೆ ಇದರಿಂದ ಉಪಯೋಗವಾಗಲಿದೆ ಎಂದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶರೀಷ ಪ್ರಭು, ಮಾಜಿ ಅಧ್ಯಕ್ಷ ಎಂ.ಡಿ.ಮುಲ್ಲಾ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ವಿಜಯ್ ಮಿರಾಶಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾನಿ ಇದ್ದರು.