ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ನ 25 ಕಾರ್ಯಕರ್ತರನ್ನು ಕೊಲೆ ಮಾಡಲಾಗಿದೆ. ರಾಜ್ಯದಲ್ಲಿ ಹಿಂಸೆ ಮಿತಿ ಮೀರಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಹಿಂಸೆಯ ಮೂಲಕವೇ ಬಿಜೆಪಿ ವಿಚಾರಧಾರೆಯನ್ನು ಮುಗಿಸಲು ಮುಂದಾಗಿರುವ ಸಿದ್ದರಾಮಯ್ಯ ಅವರ ಪ್ರಯತ್ನ ಫಲಿಸದು ಎಂದು ಆಕ್ರೋಶ ಹೊರಹಾಕಿದರು.