‘ಜಿಲ್ಲೆಯಾದ್ಯಂತ ಇದೇ ರೀತಿ ಹಲವು ಅಧಿಕಾರಿಗಳು ಇದ್ದಾರೆ. ಅಭ್ಯರ್ಥಿಗಳ ಸಂಬಂಧಿಗಳೂ ಕೂಡ ಕೆಲಸ ನಿರ್ವಹಿಸುತ್ತಿದ್ದು, ಕಾಂಗ್ರೆಸ್ ಮುಖಂಡರ ಬೆನ್ನೆಲುಬಾಗಿ ನಿಂತಿದ್ದಾರೆ. ಇವರು ಪೊಲೀಸ್ ಇಲಾಖೆಯ ವಿಶ್ವಾಸಾರ್ಹ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಗೆ ಅನ್ಯಾಯ ಆಗುತ್ತದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪಗೌಡ ತಿಳಿಸಿದರು.