ಮೈಸೂರು: ತಾಲ್ಲೂಕಿನ ಕೆಆರ್ಎಸ್ ಹಿನ್ನೀರಿನ ಹೊಸ ಆನಂದೂರು ಗ್ರಾಮದಲ್ಲಿ ಚಿರತೆ ದಾಳಿಗೆ ಕರು ಮತ್ತು ಮೇಕೆ ಬಲಿಯಾಗಿವೆ.
ಗ್ರಾಮದ ಹೊರವಲಯದಲ್ಲಿರುವ ಚಂದ್ರಶೇಖರ್ ಎಂಬುವರ ತೋಟದ ಮನೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಗುರುವಾರ ಬೆಳಿಗ್ಗೆ ಗಮನಕ್ಕೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಪರಿಶೀಲನೆ ನಡೆಸಿದರು. ಇದೇ ಮೊದಲ ಬಾರಿಗೆ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನು ಇಟ್ಟಿದ್ದು, ಸಿಬ್ಬಂದಿ ತೋಟದಲ್ಲಿ ಮೊಕ್ಕಾಂ ಹೂಡಿದ್ದಾರೆ.