ಜಿಲ್ಲಾ ಕೈಗಾರಿಕಾ ಕೇಂದ್ರ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಸಿದ್ದರಾಮಯ್ಯ ಭಾವಚಿತ್ರ ಇರುವ ಕೈಮಗ್ಗ ಮತ್ತು ಜವಳಿ ಕ್ಷೇತ್ರದ ಅಭಿವೃದ್ಧಿಯ ಪಥದಲ್ಲಿ ಎಂಬ ಸರ್ಕಾರದ ಬ್ಯಾನರ್ ಹಾಗೆಯೇ ಇದೆ.ನಗರದ ರಿಂಗ್ ರಸ್ತೆಯಲ್ಲಿ ಹಾಸನ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಒಬ್ಬರ ಭಾವಚಿತ್ರ ಹಾಗೂ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಇತರೆ ನಾಯಕರಿರುವ ಬ್ಯಾನರ್ ತೆಗೆದು ಹಾಕಿಲ್ಲ.