ಹಾಸನ: ಮುಂಬೈ, ಹೈದರಬಾದ್ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದಲ್ಲಿ ಚುನಾವಣೆ ಪ್ರಚಾರಕ್ಕೆ ಬಿಎಸ್ ಪಿ ನಾಯಕಿ ಮಾಯಾವತಿ ಭಾಗವಹಿಸುವರು ಎಂದು ಸಂಸದ ಎಚ್.ಡಿ.ದೇವೇಗೌಡ ಹೇಳಿದರು.ಬಿಎಸ್ಪಿ ಜತೆ ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಕೆಲ ಕ್ಷೇತ್ರಗಳನ್ನು ಬಿಟ್ಟು ಕೊಡಲಾಗಿದೆ. ಹಾಗಾಗಿ ಏಪ್ರಿಲ್, 2, 3 ರಂದು ರಾಜ್ಯಕ್ಕೆ ಭೇಟಿ ನೀಡುವರು ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.