ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಚಿನ್ ಡಿ. ಮಾತನಾಡಿ, ‘ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮಳೆಕೊಯ್ಲು, ಇಂಗುಗುಂಡಿ ನಿರ್ಮಾಣಕ್ಕೆ ಮುಂದಾಗಬೇಕು’ ಎಂದ ಅವರು, ‘ಪ್ರತಿಯೊಬ್ಬರು ಕಾನೂನಿನ ಅರಿವು ಹೊಂದಬೇಕು. ಸಾರ್ವಜನಿಕರಿಗೆ ಏನಾದರೂ ಕಾನೂನಿನ ತೊಡಕುಗಳ ಕುರಿತು ಮತ್ತು ಸಲಹೆಗಳನ್ನು ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಪಡೆದುಕೊಳ್ಳಬೇಕು’ ಎಂದು ಹೇಳಿದರು.