10ನೇ ತರಗತಿಯ ಗಣಿತ ವಿಷಯಕ್ಕೆ ಮರುಪರೀಕ್ಷೆ ನಡೆಸಬೇಕಾದ ಅಗತ್ಯ ಇದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ನಡೆಸಲೇಬೇಕೆಂದಿದ್ದರೆ ದೆಹಲಿ ಮತ್ತು ಹರಿಯಾಣಕ್ಕೆ ಮಾತ್ರ ಜುಲೈಯಲ್ಲಿ ಪರೀಕ್ಷೆ ನಡೆಸಲಾಗುವುದು. ದೆಹಲಿ ರಾಷ್ಟ್ರ ರಾಜಧಾನಿ ಪ್ರದೇಶ ಮತ್ತು ಹರಿಯಾಣದಲ್ಲಿ ಪರೀಕ್ಷೆ ನಡೆಸಬೇಕೇ ಎಂಬ ಬಗ್ಗೆ ಪ್ರಕರಣದ ವಿವರವಾದ ತನಿಖೆಯ ಬಳಿಕ 15 ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.