‘ಈ ಹಿಂದೆ ಜಲಮೂಲದ ನೀರನ್ನು ಕುಡಿಯಲು ಹಾಗೂ ವ್ಯವಸಾಯಕ್ಕೆ ಬಳಸಲಾಗುತ್ತಿತ್ತು. ಕೆರೆಯ ಸುತ್ತಲೂ ಬಡಾವಣೆ ನಿರ್ಮಾಣವಾಗುತ್ತಿರುವುದರಿಂದ ವ್ಯವಸಾಯ ಸ್ಥಗಿತಗೊಂಡಿದೆ. ಬಡಾವಣೆಗೆ ಶೃಂಗಾರ ಬರಬೇಕಾದರೆ ಕೆರೆ ಉಳಿಯಬೇಕು. ಈ ನಿಟ್ಟಿನಲ್ಲಿ ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಶಾಸಕರು ಮುಂದಾಗಿದ್ದರು. ಆದರೆ, ಒತ್ತುವರಿ ತೆರವು ಮಾಡದ ಕಾರಣ ಈ ಪ್ರಸ್ತಾವ ನನೆಗುದಿಗೆ ಬಿದ್ದಿದೆ’ ಎಂದು ಕನ್ನಳ್ಳಿ ವೀರಭದ್ರಸ್ವಾಮಿ ನಿತ್ಯಾನ್ನ ದಾಸೋಹ ಸಮಿತಿಯ ಅಧ್ಯಕ್ಷ ಎಸ್.ಶಾಂತರಾಜು ದೂರಿದರು.