ಸುಶೀಲಾನಗರ (ಸಂಡೂರು): ‘ಮದುವೆ ಎನ್ನುವುದು ಎರಡು ಮನಸ್ಸುಗಳ ಸಂಬಂಧ. ದಂಪತಿಗಳು ಪರಸ್ಪರ ಪ್ರೀತಿ, ಸಹಕಾರ, ವಿಶ್ವಾಸದಿಂದ ಆದರ್ಶ ಜೀವನ ನಡೆಸಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು’ ಎಂದು ರಾಜನಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಲಹೆ ನೀಡಿದರು. ತಾಲ್ಲೂಕಿನ ಸುಶೀಲಾನಗರ ಗ್ರಾಮದಲ್ಲಿ ಶುಕ್ರವಾರ ವಾಲ್ಮೀಕಿ ನಾಯಕ ಮಹಾಸಭಾದ ಗ್ರಾಮದ ಘಟಕದ ವತಿಯಿಂದ ಬಿಕೆಜಿ, ವೆಸ್ಕೊ ಹಾಗೂ ಝೆಡ್ಟಿಸಿ ಕಂಪನಿಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿದ್ದ 3ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.