ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವೀವ್‌ ಸ್ಮಿತ್‌ಗಾಗಿ ಮರುಗಿದ ಯುವರಾಜ್‌ ಸಿಂಗ್‌

Last Updated 31 ಮಾರ್ಚ್ 2018, 12:36 IST
ಅಕ್ಷರ ಗಾತ್ರ

ನವದೆಹಲಿ: ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ನಿಷೇಧಕ್ಕೆ ಒಳಗಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟೀವ್ ಸ್ಮಿತ್‌ ಕುರಿತು ಕ್ರಿಕೆಟಿಗ ಯುವರಾಜ್‌ ಸಿಂಗ್‌ ಮರುಕ ವ್ಯಕ್ತಪಡಿಸಿದ್ದಾರೆ.

‘ಸ್ಮಿತ್‌ನನ್ನು ಈ ಸ್ಥಿತಿಯಲ್ಲಿ ನೋಡಲು ನಿಜಕ್ಕೂ ದುಃಖವಾಗುತ್ತಿದೆ. ಆತ ತಪ್ಪು ಮಾಡಿದ್ದಾನೆ, ಅದರ ಪರಿಣಾಮ ಎದುರಿಸುತ್ತಿದ್ದಾನೆ ಎಂಬುದು ನಮಗೆ ಗೊತ್ತು. ಆತ ಆಸ್ಟ್ರೇಲಿಯಾ ತಂಡ ಯಶಸ್ಸಿನ ಉತ್ತುಂಗಕ್ಕೆ ಏರಲು ಶ್ರಮಿಸಿದ ಒಳ್ಳೆಯ ಹುಡುಗ, ದಿಗ್ಗಜ ಬ್ಯಾಟ್ಸ್‌ಮನ್‌ ಎಂಬುದನ್ನು ಮರೆಯಬಾರದು.

ಹಾಗೆಯೇ ‘ಬಾಲ್‌ ವಿರೂಪಗೊಳಿಸುವ ಕೃತ್ಯ ನಡೆಸಿದ ಮೊದಲಿಗನೆನಲ್ಲ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT