ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಿಂದಲೂ ಜೆಡಿಎಸ್ ಮುಗಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ದೇಶದಲ್ಲಿ ಬಿಜೆಪಿ ಲೂಟಿ ಮಾಡುತ್ತಿವೆ. ನಾವು ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಸಿಪಿಐಎಂ ಹಾಗೂ ಸಿಪಿಐ ಜತೆ ಹೊಂದಾಣಿಕೆಗೆ ಮುಂದಾಗಿದ್ದೆವು ಆದರೆ ಅವರು ಮುಂದೆ ಬರಲಿಲ್ಲ’ ಎಂದು ತಿಳಿಸಿದರು.