ಬೆಂಗಳೂರು: ಹನುಮ ಜಯಂತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಶುಭಾಶಯ ಕೋರಿರುವುದನ್ನು ಪ್ರಸ್ತಾಪಿಸಿರುವ ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ ಹಾಗೂ ಧೈರ್ಯದ ಸಂಕೇತವಾದ ಹನುಮ ಜಯಂತಿಯಂದು ನಾಡಿನಲ್ಲಿ ಸದಾಕಾಲ ಸಮೃದ್ಧಿ ಹಾಗೂ ಸಂತಸ ತುಂಬಿರಲಿ, ಭಗವಂತನ ಆಶೀರ್ವಾದ ನಾಡಿನ ಎಲ್ಲ ಜನರ ಮೇಲಿರಲಿ ಎಂದು ಹಾರೈಸುತ್ತೇನೆ.