ಬೆಂಗಳೂರು: ಚುನಾವಣಾ ನೀತಿ ಸಂಹಿತೆಜಾರಿಯಾದ ಬಳಿಕವೂ ನಿಗಮ–ಮಂಡಳಿಗಳ ಅಧ್ಯಕ್ಷರು, ಸದನ ಸಮಿತಿ ಅಧಿಕಾರಿಗಳು ಸರ್ಕಾರಿ ಕಾರುಗಳನ್ನು ಬಳಸುತ್ತಿದ್ದು, ಕೂಡಲೇ ವಶಕ್ಕೆ ಪಡೆಯಬೇಕು ಎಂದು ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ರಮೇಶ್ ಬಾಬು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಯಾವುದೇ ಪಕ್ಷ ‘ಕಾಸಿಗಾಗಿ ಸುದ್ದಿ’ ಹೆಸರಿನಲ್ಲಿ ಪ್ರಚಾರಕ್ಕೆ ಮುಂದಾದರೆ ಅದನ್ನು ಚುನಾವಣಾ ವೆಚ್ಚಕ್ಕೆ ಪರಿಗಣಿಸಬೇಕು. ಎಂದು ಮನವಿ ಮಾಡಿದ್ದಾರೆ.