ಲಿಂಗಾಯತ ಅಲ್ಪಸಂಖ್ಯಾತ ಧರ್ಮ ಮಾನ್ಯತೆಗಾಗಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ತಲುಪಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಹೇಳಿದ್ದರು. ಕರ್ನಾಟಕ ಸರ್ಕಾರದ ಶಿಫಾರಸು ಕೇಂದ್ರವನ್ನು ತಲುಪಿದೆಯೇ? ಎಂದು ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಮಾರ್ಚ್ 28ರಂದು ಲೋಕಸಭೆಯಲ್ಲಿ ಉತ್ತರಿಸಿದ್ದರು.