<p><strong>ಲಖನೌ: </strong>‘ಉತ್ತರಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ’ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p>.<p>‘ಪಕ್ಷದ ಆಡಳಿತಾವಧಿಯಲ್ಲಿ ಆರಂಭಿಸಲಾದ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ, ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ವಂಚಿಸುತ್ತಿದೆ’ ಎಂದು ಅವರು ದೂರಿದ್ದಾರೆ.</p>.<p>‘ಗಾಜಿಯಾಬಾದ್ನಲ್ಲಿ ಶುಕ್ರವಾರ ಉದ್ಘಾಟನೆಯಾದ ಎತ್ತರಿಸಿದ ಮೇಲ್ಸೇತುವೆಗೆ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿಯೇ ಚಾಲನೆ ನೀಡಲಾಗಿತ್ತು’ ಎಂದು ಹೇಳಿದ್ದಾರೆ.</p>.<p>ವಂಶಾಡಳಿತ ಕುರಿತು ಯೋಗಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ವಂಶಾಡಳಿತದಿಂದಾಗಿ ರಾಜಕೀಯವಾಗಿ ಉನ್ನತ ಸ್ಥಾನ ಪ್ರವೇಶಿಸಿದ್ದೇನೆ ಎಂಬುದು ನಿಜ. ಅದರ ಜೊತೆಗೆ ರಾಜ್ಯದ ಜನ ನನ್ನ ಸಾಮರ್ಥ್ಯವನ್ನು ಗುರುತಿಸಿದ್ದಾರೆ ಎಂಬುದನ್ನು ಮರೆಯಬಾರದು’ ಎಂದು ತಿರುಗೇಟು ನೀಡಿದರು.</p>.<p>ಮುಂಬರುವ ವಿಧಾನಪರಿಷತ್ ಚುನಾವಣೆಗೆ ಎಸ್ಪಿ–ಬಿಎಸ್ಪಿ ನಡುವೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.</p>.<p>ಈ ಸರ್ಕಾರವಂತೂ ಯುವಕರಿಗೆ ಉದ್ಯೋಗ ನೀಡುವುದಿಲ್ಲ. ಹಿಂದೆ ನಮ್ಮ ಸರ್ಕಾರ ಉದ್ಯೋಗ ನೀಡಿರುವುದನ್ನು ಪ್ರಶ್ನಿಸುತ್ತಿದೆ’ ಎಂದು ಅಖಿಲೇಶ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>‘ಉತ್ತರಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದು, ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದೆ’ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.</p>.<p>‘ಪಕ್ಷದ ಆಡಳಿತಾವಧಿಯಲ್ಲಿ ಆರಂಭಿಸಲಾದ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ, ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ವಂಚಿಸುತ್ತಿದೆ’ ಎಂದು ಅವರು ದೂರಿದ್ದಾರೆ.</p>.<p>‘ಗಾಜಿಯಾಬಾದ್ನಲ್ಲಿ ಶುಕ್ರವಾರ ಉದ್ಘಾಟನೆಯಾದ ಎತ್ತರಿಸಿದ ಮೇಲ್ಸೇತುವೆಗೆ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿಯೇ ಚಾಲನೆ ನೀಡಲಾಗಿತ್ತು’ ಎಂದು ಹೇಳಿದ್ದಾರೆ.</p>.<p>ವಂಶಾಡಳಿತ ಕುರಿತು ಯೋಗಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ವಂಶಾಡಳಿತದಿಂದಾಗಿ ರಾಜಕೀಯವಾಗಿ ಉನ್ನತ ಸ್ಥಾನ ಪ್ರವೇಶಿಸಿದ್ದೇನೆ ಎಂಬುದು ನಿಜ. ಅದರ ಜೊತೆಗೆ ರಾಜ್ಯದ ಜನ ನನ್ನ ಸಾಮರ್ಥ್ಯವನ್ನು ಗುರುತಿಸಿದ್ದಾರೆ ಎಂಬುದನ್ನು ಮರೆಯಬಾರದು’ ಎಂದು ತಿರುಗೇಟು ನೀಡಿದರು.</p>.<p>ಮುಂಬರುವ ವಿಧಾನಪರಿಷತ್ ಚುನಾವಣೆಗೆ ಎಸ್ಪಿ–ಬಿಎಸ್ಪಿ ನಡುವೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.</p>.<p>ಈ ಸರ್ಕಾರವಂತೂ ಯುವಕರಿಗೆ ಉದ್ಯೋಗ ನೀಡುವುದಿಲ್ಲ. ಹಿಂದೆ ನಮ್ಮ ಸರ್ಕಾರ ಉದ್ಯೋಗ ನೀಡಿರುವುದನ್ನು ಪ್ರಶ್ನಿಸುತ್ತಿದೆ’ ಎಂದು ಅಖಿಲೇಶ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>