<p><strong>ಚೆನ್ನೈ:</strong> ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಒತ್ತಾಯಿಸಿ ಡಿಎಂಕೆ ಈ ತಿಂಗಳ 5ರಂದು ತಮಿಳುನಾಡು ಬಂದ್ಗೆ ಕರೆನೀಡಿದೆ.</p>.<p>ಸಮಾನ ಮನಸ್ಕ ವಿರೋಧ ಪಕ್ಷಗಳ ಮುಖಂಡರ ಜತೆ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ರೈತರು, ವ್ಯಾಪಾರಿಗಳು, ವಿದ್ಯಾರ್ಥಿ ಸಂಘಟನೆಗಳಿಂದ ಸಹಕಾರವನ್ನು ಕೋರಲಾಗಿದ್ದು ಬಂದ್ ನಡೆಸಲು ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ’ ಎಂದರು.</p>.<p>ಕಾಂಗ್ರೆಸ್ನ ತಮಿಳುನಾಡು ಘಟಕದ ಅಧ್ಯಕ್ಷ ಸು.ತಿರುನವುಕ್ಕರಸಾರ್, ವಿ.ಸಿ.ಕೆ ಮುಖ್ಯಸ್ಥ ತಿರುಮವಲವನ್, ಸಿಪಿಎಂ ಹಾಗೂ ಸಿಪಿಐ ರಾಜ್ಯ ಕಾರ್ಯದರ್ಶಿಗಳಾದ ಕೆ. ಬಾಲಕೃಷ್ಣನ್, ಆರ್.ಮುಥಾರಸನ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಬಂದ್ ನಡೆಯಲಿದ್ದು, ಈ ವೇಳೆ ‘ಕಾವೇರಿ ಹಕ್ಕು ರಕ್ಷಿಸಿ ಯಾತ್ರೆ’ ನಡೆಸಲಾಗುವುದು ಎಂದು ಸ್ಟಾಲಿನ್ ತಿಳಿಸಿದರು.</p>.<p><strong>ಕಪ್ಪುಬಾವುಟ ಪ್ರದರ್ಶನ:</strong> ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು ತಮಿಳುನಾಡಿಗೆ ಭೇಟಿ ನೀಡುವ ವೇಳೆ ಪಕ್ಷದ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶನ ಮಾಡಲಿದ್ದಾರೆ ಎಂದ ಸ್ಟಾಲಿನ್, ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ವಿಳಂಬ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದರು.</p>.<p><strong>ಗಡುವು ಅಂತ್ಯ:</strong> ನದಿ ವಿವಾದ ಕುರಿತು ಫೆ.16ರಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಆರು ವಾರಗಳಲ್ಲಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿತ್ತು. ಕೋರ್ಟ್ ನೀಡಿದ್ದ ಗಡುವು ಮಾರ್ಚ್ 29ಕ್ಕೆ ಮುಗಿದಿದೆ.</p>.<p>**</p>.<p><strong>ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ</strong><br /> ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬೆಂಬಲಿಸಿದರೆ ಎನ್ಡಿಎ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿನ ಅವಿಶ್ವಾಸ ಗೊತ್ತುವಳಿ ಮಂಡನೆಗೆ ತಾವು ಸಿದ್ಧ ಎಂದು ಎಐಎಡಿಎಂಕೆಯ ಹಿರಿಯ ಮುಖಂಡ ಎಂ. ತಂಬಿದೊರೈ ಹೇಳಿದ್ದಾರೆ.</p>.<p>‘ಇದಕ್ಕೆ ಬೆಂಬಲ ನೀಡುವುದಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೇಳಿಕೆ ನೀಡಬೇಕಿದೆ. ಅವರೆಲ್ಲರೂ ನಮಗೆ ಬೆಂಬಲ ನೀಡಿದರೆ ಮಾತ್ರ ಅವಿಶ್ವಾಸ ಗೊತ್ತುವಳಿ ಮಂಡನೆ ಸಾಧ್ಯವಾಗಲಿದೆ’ ಎಂದು ಪತ್ರಕರ್ತರಿಗೆ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕೇಂದ್ರ ಸರ್ಕಾರ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಬೇಕು ಎಂದು ಒತ್ತಾಯಿಸಿ ಡಿಎಂಕೆ ಈ ತಿಂಗಳ 5ರಂದು ತಮಿಳುನಾಡು ಬಂದ್ಗೆ ಕರೆನೀಡಿದೆ.</p>.<p>ಸಮಾನ ಮನಸ್ಕ ವಿರೋಧ ಪಕ್ಷಗಳ ಮುಖಂಡರ ಜತೆ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ರೈತರು, ವ್ಯಾಪಾರಿಗಳು, ವಿದ್ಯಾರ್ಥಿ ಸಂಘಟನೆಗಳಿಂದ ಸಹಕಾರವನ್ನು ಕೋರಲಾಗಿದ್ದು ಬಂದ್ ನಡೆಸಲು ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ’ ಎಂದರು.</p>.<p>ಕಾಂಗ್ರೆಸ್ನ ತಮಿಳುನಾಡು ಘಟಕದ ಅಧ್ಯಕ್ಷ ಸು.ತಿರುನವುಕ್ಕರಸಾರ್, ವಿ.ಸಿ.ಕೆ ಮುಖ್ಯಸ್ಥ ತಿರುಮವಲವನ್, ಸಿಪಿಎಂ ಹಾಗೂ ಸಿಪಿಐ ರಾಜ್ಯ ಕಾರ್ಯದರ್ಶಿಗಳಾದ ಕೆ. ಬಾಲಕೃಷ್ಣನ್, ಆರ್.ಮುಥಾರಸನ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಬಂದ್ ನಡೆಯಲಿದ್ದು, ಈ ವೇಳೆ ‘ಕಾವೇರಿ ಹಕ್ಕು ರಕ್ಷಿಸಿ ಯಾತ್ರೆ’ ನಡೆಸಲಾಗುವುದು ಎಂದು ಸ್ಟಾಲಿನ್ ತಿಳಿಸಿದರು.</p>.<p><strong>ಕಪ್ಪುಬಾವುಟ ಪ್ರದರ್ಶನ:</strong> ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು ತಮಿಳುನಾಡಿಗೆ ಭೇಟಿ ನೀಡುವ ವೇಳೆ ಪಕ್ಷದ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶನ ಮಾಡಲಿದ್ದಾರೆ ಎಂದ ಸ್ಟಾಲಿನ್, ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ವಿಳಂಬ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದರು.</p>.<p><strong>ಗಡುವು ಅಂತ್ಯ:</strong> ನದಿ ವಿವಾದ ಕುರಿತು ಫೆ.16ರಂದು ತೀರ್ಪು ನೀಡಿದ್ದ ಸುಪ್ರೀಂಕೋರ್ಟ್, ಆರು ವಾರಗಳಲ್ಲಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿತ್ತು. ಕೋರ್ಟ್ ನೀಡಿದ್ದ ಗಡುವು ಮಾರ್ಚ್ 29ಕ್ಕೆ ಮುಗಿದಿದೆ.</p>.<p>**</p>.<p><strong>ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ</strong><br /> ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬೆಂಬಲಿಸಿದರೆ ಎನ್ಡಿಎ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿನ ಅವಿಶ್ವಾಸ ಗೊತ್ತುವಳಿ ಮಂಡನೆಗೆ ತಾವು ಸಿದ್ಧ ಎಂದು ಎಐಎಡಿಎಂಕೆಯ ಹಿರಿಯ ಮುಖಂಡ ಎಂ. ತಂಬಿದೊರೈ ಹೇಳಿದ್ದಾರೆ.</p>.<p>‘ಇದಕ್ಕೆ ಬೆಂಬಲ ನೀಡುವುದಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೇಳಿಕೆ ನೀಡಬೇಕಿದೆ. ಅವರೆಲ್ಲರೂ ನಮಗೆ ಬೆಂಬಲ ನೀಡಿದರೆ ಮಾತ್ರ ಅವಿಶ್ವಾಸ ಗೊತ್ತುವಳಿ ಮಂಡನೆ ಸಾಧ್ಯವಾಗಲಿದೆ’ ಎಂದು ಪತ್ರಕರ್ತರಿಗೆ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>