<p><strong>ಬೆಂಗಳೂರು: </strong>ತುಮಕೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಸೋಮವಾರ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.</p>.<p>ತುಮಕೂರಿನ ಜಿಲ್ಲಾ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನ ಕಾರ್ಯಕ್ರಮದಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಮಾತನಾಡಿ, ‘ಪೊಲೀಸ್ ಕಲ್ಯಾಣ ನಿಧಿಯಲ್ಲಿ ನಿಶ್ಚಿತ ಠೇವಣಿ ₹ 21.82 ಲಕ್ಷ, ₹ 1.55 ಲಕ್ಷ ಉಳಿತಾಯ ಖಾತೆಯಲ್ಲಿದೆ. 2017ರಲ್ಲಿ ಧ್ವಜ ಮಾರಾಟದಿಂದ ₹ 4.13 ಲಕ್ಷ ಸಂಗ್ರಹವಾಗಿದೆ. 1000 ನಿವೃತ್ತರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p>2017-18 ರಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವೇದಿಕೆಯಲ್ಲಿದ್ದರು.</p>.<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ಡಿಸಿಪಿಗಳಾದ ಸೀಮಾ ಲಾಟ್ಕರ್, ಮಹಾನಿಂಗ ನಂದಗಾವಿ ಪೊಲೀಸ್ ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು.</p>.<p><strong>ಕಲಬುರ್ಗಿ: </strong>ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು.<br /> ಈಶಾನ್ಯ ವಲಯ ಐಜಿಪಿ ಎಸ್.ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಿ.ಜೆ.ಲೋಕೇಶ್ ಭಾಗವಹಿಸಿದ್ದರು.</p>.<p>*<br /> </p>.<p><strong>ಹುಬ್ಬಳ್ಳಿ: </strong>ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನ ಕಾರ್ಯಕ್ರಮ ನಡೆಯುತ್ತಿದೆ. ನಿವೃತ್ತ ಐಪಿಎಸ್ ಅಧಿಕಾರಿ ಪಾಂಡುರಂಗ ರಾಣೆ, ಹುಬ್ಬಳ್ಳಿ, ಧಾರವಾಡ ಮಹಾನಗರ ಕಮಿಷನರ್ ನಾಗರಾಜ, ಡಿವೈಎಸ್ಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್. ನೇಮಗೌಡ ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತುಮಕೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ ಸೇರಿ ರಾಜ್ಯದ ಹಲವೆಡೆ ಸೋಮವಾರ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು.</p>.<p>ತುಮಕೂರಿನ ಜಿಲ್ಲಾ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನ ಕಾರ್ಯಕ್ರಮದಲ್ಲಿ ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಮಾತನಾಡಿ, ‘ಪೊಲೀಸ್ ಕಲ್ಯಾಣ ನಿಧಿಯಲ್ಲಿ ನಿಶ್ಚಿತ ಠೇವಣಿ ₹ 21.82 ಲಕ್ಷ, ₹ 1.55 ಲಕ್ಷ ಉಳಿತಾಯ ಖಾತೆಯಲ್ಲಿದೆ. 2017ರಲ್ಲಿ ಧ್ವಜ ಮಾರಾಟದಿಂದ ₹ 4.13 ಲಕ್ಷ ಸಂಗ್ರಹವಾಗಿದೆ. 1000 ನಿವೃತ್ತರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಗಿದೆ’ ಎಂದು ಹೇಳಿದರು.</p>.<p>2017-18 ರಲ್ಲಿ ನಿವೃತ್ತರಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸನ್ಮಾನ ಮಾಡಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ವೇದಿಕೆಯಲ್ಲಿದ್ದರು.</p>.<p><strong>ಬೆಳಗಾವಿ:</strong> ಇಲ್ಲಿನ ಜಿಲ್ಲಾ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಯಿತು. ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ಡಿಸಿಪಿಗಳಾದ ಸೀಮಾ ಲಾಟ್ಕರ್, ಮಹಾನಿಂಗ ನಂದಗಾವಿ ಪೊಲೀಸ್ ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು.</p>.<p><strong>ಕಲಬುರ್ಗಿ: </strong>ಇಲ್ಲಿನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು.<br /> ಈಶಾನ್ಯ ವಲಯ ಐಜಿಪಿ ಎಸ್.ಮುರುಗನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಿ.ಜೆ.ಲೋಕೇಶ್ ಭಾಗವಹಿಸಿದ್ದರು.</p>.<p>*<br /> </p>.<p><strong>ಹುಬ್ಬಳ್ಳಿ: </strong>ಇಲ್ಲಿನ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಪೊಲೀಸ್ ಧ್ವಜ ದಿನ ಕಾರ್ಯಕ್ರಮ ನಡೆಯುತ್ತಿದೆ. ನಿವೃತ್ತ ಐಪಿಎಸ್ ಅಧಿಕಾರಿ ಪಾಂಡುರಂಗ ರಾಣೆ, ಹುಬ್ಬಳ್ಳಿ, ಧಾರವಾಡ ಮಹಾನಗರ ಕಮಿಷನರ್ ನಾಗರಾಜ, ಡಿವೈಎಸ್ಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್. ನೇಮಗೌಡ ಭಾಗವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>