ಎಸಿಪಿ ರಾಜೇಂದ್ರಕುಮಾರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇಲೆ ಕೃಷ್ಣಾಪುರ ನಾಲ್ಕನೇ ಬ್ಲಾಕ್ನ ಸಂದೀಪ್ ದೇವಾಡಿಗ ಮನೆ ಮೇಲೆ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಮೂರು ತಲವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂದೀಪ್ ನೀಡಿದ ಮಾಹಿತಿಯಂತೆ ಆತನ ಸಹಚರರಾದ ಆಕಾಶ್, ಚರಣ್ರಾಜ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆರೋಪಿಗಳು ನೀಡಿದ ಮಾಹಿತಿಯಂತೆ ರಕ್ಷಿತ್ನನ್ನು ಬಂಧಿಸಿದ ಪೊಲೀಸರು, ಆತನ ಬಳಿ ಇದ್ದ ಎರಡು ನಾಡ ಪಿಸ್ತೂಲ್ಗಳನ್ನು ವಶಕ್ಕೆ ಪಡೆದಿದ್ದಾರೆ.