ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ‘ಮುಖ್ಯಮಂತ್ರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಚರ್ಚೆಯ ಬಳಿಕವೇ ವರ್ಗಾವಣೆ ಆದೇಶ ಮಾಡಲಾಗಿದೆ. ಇದು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದಲೇ ಕೈಗೊಂಡ ನಿರ್ಧಾರ. ಒಬ್ಬ ಐಎಎಸ್ ಅಧಿಕಾರಿಯನ್ನು ಎರಡು ವರ್ಷಗಳವರೆಗೆ ಅದೇ ಸ್ಥಳದಲ್ಲಿ ಮುಂದುವರಿಸಬೇಕು ಎಂಬ ಕಡ್ಡಾಯ ನಿಯಮವೇನೂ ಇರುವುದಿಲ್ಲ. ಆದ್ದರಿಂದ ಅರ್ಜಿ ವಜಾಗೊಳಿಸಬೇಕು’ ಎಂದು ಮನವಿ ಮಾಡಿದರು.