ಜೇಟ್ಲಿ ಅವರು ಅಧ್ಯಕ್ಷರಾಗಿದ್ದಾಗ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ನಲ್ಲಿ (ಡಿಡಿಸಿಎ) ಅವ್ಯವಹಾರ ನಡೆದಿದೆ ಎಂದು ಕೇಜ್ರಿವಾಲ್ ಹಾಗೂ ಎಎಪಿ ಮುಖಂಡರು ಗಂಭೀರ ಆರೋಪ ಮಾಡಿದ್ದರು. ಇದನ್ನು ಅಲ್ಲಗಳೆದಿದ್ದ ಜೇಟ್ಲಿ, 2015ರಲ್ಲಿ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ರಾಘವ್ ಚಂದ್ರ, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ಅಶುತೋಷ್ ಮತ್ತು ದೀಪಕ್ ಬಾಜ್ಪೈ ವಿರುದ್ಧ ₹10 ಕೋಟಿಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.