ಬೆಂಗಳೂರು: ರಾಜ್ಯ ಸರ್ಕಾರ ಬಡ್ತಿ ಮೀಸಲು ಕಾಯ್ದೆ–2012 ಅನ್ನು ರದ್ದುಪಡಿಸಿ ಸುಪ್ರೀಂ ಕೋರ್ಟ್ 2017ರ ಫೆ. 9ರಂದು ನೀಡಿದ್ದ ಆದೇಶ ಪಾಲಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕೊನೆಗೂ ನೌಕರರ ಜ್ಯೇಷ್ಠತಾ ಪಟ್ಟಿ ಪರಿಷ್ಕರಿಸಿದೆ.
ತಾತ್ಕಾಲಿಕ ಪರಿಷ್ಕೃತ ಪಟ್ಟಿಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಿರುವ ಇಲಾಖೆ, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ. ಕೋರ್ಟ್ ಆದೇಶ
ದಂತೆ 1978ರಿಂದ ಅನ್ವಯವಾಗುವಂತೆ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಲಾಗಿದೆ.
‘ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.