ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವು ಕಚ್ಚಿ ಯುವಕ ಸಾವು

Last Updated 2 ಏಪ್ರಿಲ್ 2018, 19:43 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಗುಂಟೆಯ ರಾಯಲ್ ಎನ್‌ಕ್ಲೇವ್‌ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ಹಾವು ಕಚ್ಚಿ ತಮಿಳುನಾಡಿನ ಯುವಕ ಮಹರಾಜನ್ ಸೋಮವಾರ ಮೃತಪಟ್ಟಿದ್ದಾರೆ.

ಮಹರಾಜನ್, ಹಾವನ್ನು ಹಿಡಿಯುವ ಹಾಗೂ ಅದರ ಜತೆ ಆಟವಾಡುವ ದೃಶ್ಯವನ್ನು ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ಮಧ್ಯಾಹ್ನ ನಾಗರಹಾವು ಕಾಣಿಸಿಕೊಂಡಿತ್ತು. ಜನರನ್ನು ಕಂಡ ಅದು ಭಯಗೊಂಡು ಪೊದೆಯೊಂದರಲ್ಲಿ ಅಡಗಿತ್ತು. ಆ ಬಗ್ಗೆ ತಿಳಿದ ಮಹರಾಜನ್ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಬರಿಗೈಯಲ್ಲಿ ಅದನ್ನು ಹಿಡಿದಿದ್ದರು. ಆಗಲೇ ಅದು ಕಚ್ಚಿದೆ ಎಂದು ಬಾಗಲಗುಂಟೆ ಪೊಲೀಸರು ಹೇಳಿದರು.

ಹಾವು ಕಚ್ಚಿರುವುದೇ ಅವರಿಗೆ ಗೊತ್ತಾಗಿಲ್ಲ. ಅದರ ಜತೆ ರಸ್ತೆ ಮಧ್ಯೆದಲ್ಲಿ ಆಟವಾಡುತ್ತಿದ್ದ ಅವರು ಕೆಲ ಹೊತ್ತಿನಲ್ಲಿಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸಪ್ತಗಿರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟರಲ್ಲಿ ಮೃತಪಟ್ಟಿದ್ದರು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT