ನಿವೃತ್ತ ಪೊಲೀಸ್ ಉಪನಿರೀಕ್ಷಕ ಎಚ್.ಸಿ.ಭಜಂತ್ರಿ ಮಾತನಾಡಿ, ‘ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಕಾರ್ಯ ಪೊಲೀಸ್ ಇಲಾಖೆ ಮಾಡುತ್ತಿದೆ. ಸಾಧನೆ ಶಾಶ್ವತವಾಗಿರಬೇಕಾದರೆ ವೃತ್ತಿಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಅಗತ್ಯ’ ಎಂದರು.‘ಜೀವನದಲ್ಲಿ ಎಷ್ಟು ವರ್ಷ ಬದುಕಿದ್ದೇವೆ ಎಂಬುದು ಮುಖ್ಯವಲ್ಲ. ಏನು ಸಾಧಿಸಿದ್ದೇವೆ ಎಂಬುದು ಬಹಳ ಮುಖ್ಯವಾಗಿದೆ. ಸಮಾಜದ ಪತ್ರಿಯೊಂದು ವರ್ಗದ ಜನರ ರಕ್ಷಣೆಗೆ ಬದ್ಧರಾಗಬೇಕು. ಪೊಲೀಸ್ ಸಮವಸ್ತ್ರದ ನೀತಿ–ನಿಯಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.ಜಿಲ್ಲೆಗೆ ಬೇರೆ ಬೇರೆ ಕಡೆಗಳಿಂದ ಕೆಲಸ ಕಾರ್ಯಗಳಿಗೆ ಬರುವ ನಿವೃತ್ತ ಪೊಲೀಸ್ ಸಿಬ್ಬಂದಿಗೆ ತಂಗಲು ಸರಿಯಾದ ವ್ಯವಸ್ಥೆ ಇಲ್ಲ. ಇಲಾಖೆಯ ಕಲ್ಯಾಣ ನಿಧಿಯಿಂದ ವ್ಯವಸ್ಥೆ ಕಲ್ಪಿಸಿಕೊಡುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಅವರು ಮನವಿ ಮಾಡಿದರು.