ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗಕ್ಕೆ ರಾಹುಲ್ ಗಾಂಧಿ: ಬಿಎಸ್‌ವೈ ತವರು ಜಿಲ್ಲೆಯಲ್ಲಿ ಯಾತ್ರೆ

Last Updated 3 ಏಪ್ರಿಲ್ 2018, 6:56 IST
ಅಕ್ಷರ ಗಾತ್ರ

ಶಿವಮೊಗ್ಗ: ಅಂತಿಮ ಹಂತದ ಜನಾಶೀರ್ವಾದ ಯಾತ್ರೆ ಸಲುವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಯಾತ್ರೆ ಕೈಗೊಳ್ಳಲಿರುವ ರಾಹುಲ್ ಮಂಗಳವಾರ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಬಂದಿಳಿದಿದ್ದಾರೆ. ಅವರು ಇಲ್ಲಿನ ಗೋಪಿ ವೃತ್ತದಲ್ಲಿ ರೋಡ್‌ ಶೋ ನಡೆಸಲಿದ್ದಾರೆ.

ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತ್ಯೇಕ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದು, ಪಕ್ಷದ ಅಧ್ಯಕ್ಷರಿಗೆ ಸಾಥ್ ನೀಡಲಿದ್ದಾರೆ.

ಬಿಜೆಪಿ ವಿರುದ್ಧ ಟೀಕೆ: ರಾಹುಲ್ ಗಾಂಧಿ ಬರುವಿಕೆಗೆ ಹೆಲಿಪ್ಯಾಡ್ ಬಳಿ ಕಾಯುತ್ತಿದ್ದಾಗ ಮಾತನಾಡಿದ ಕಾಂಗ್ರೆಸ್  ಮುಖಂಡ ಬಿ.ಕೆ.ಹರಿಪ್ರಸಾದ್ ಬಿಜೆಪಿಯನ್ನು ಟೀಕಿಸಿದರು.

‘ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಯ ವಿಷಯ ಹಳೆಯದ್ದು. ಈ ಚುನಾವಣೆಗೆ ಅದನ್ನು ತಳುಕು ಹಾಕಬೇಕಿಲ್ಲ. ಬಿಜೆಪಿ ಒಳ್ಳೆಯ ಘೋಷಣೆಗಳನ್ನಷ್ಟೇ ಕೊಟ್ಟಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರೂ ಪ್ರಯೋಗಗಳನ್ನು ಮಾಡುತ್ತಾರೆ. ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭದ ನಂತರ ಕಾಂಗ್ರೆಸ್‌ಗೆ ಸಮಸ್ಯೆ ಎದುರಾಗಿತ್ತು. ಮತ್ತೆ 1990ರ ದಶಕದ ಅಂತ್ಯದಲ್ಲೂ ಪಕ್ಷ  ಬಿಕ್ಕಟ್ಟು ಎದುರಿಸಿತ್ತು. ಈಗ ಜನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಕಾಶ ಕೊಟ್ಟು ಪಾಠ ಕಲಿತಿದ್ದಾರೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT