ಬಾಗಲಕೋಟೆ: ‘ಶಿವಯೋಗ ಮಂದಿರ ಒಂದು ರಾಜಕೀಯೇತರ ಸಂಸ್ಥೆಯಾಗಿದೆ. ಇಲ್ಲಿಗೆ ಯಾರೂ ಬೇಕಾದರೂ ಭೇಟಿ ಮಾಡಬಹುದು. ಈ ಹಿಂದೆ ರಾಜಕೀಯ ಮುಖಂಡರಾದ ಸೋನಿಯಾ ಗಾಂಧಿ, ಎಲ್.ಕೆ. ಅಡ್ವಾಣಿ ಭೇಟಿ ನೀಡಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಯ ಹಿಂದೆ ಯಾವುದೇ ರಾಜಕೀಯ ಇಲ್ಲ’ ಎಂದು ಶಿವಯೋಗ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಹೇಳಿದರು.