ನವದೆಹಲಿ: ಮೂರು ವರ್ಷಗಳ ಹಿಂದೆ ಇರಾಕ್ನ ಮೋಸುಲ್ನಲ್ಲಿ ಐಎಸ್ ಉಗ್ರರಿಂದ ಹತ್ಯೆಯಾದ 39 ಮಂದಿ ಭಾರತೀಯ ಸಂಸ್ರತ್ತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ್ದಾರೆ.
ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ಇರಾಕ್ಗೆ ತೆರಳಿ ಮೃತದೇಹಗಳ ಅವಶೇಷಗಳ ಹಸ್ತಾಂತರ ಪ್ರಕ್ರಿಯೆಗೆ ಸಂಬಂಧಿಸಿದ ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನೋಡಿಕೊಂಡಿದ್ದರು.
ಮೃತ ಸಂಸ್ರತ್ತ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮಂಗಳವಾರ ಸಂಸತ್ ಎದುರು ಪಂಜಾಬ್ನ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ್ದರು.
39 ಮೃತರ ಪೈಕಿ 27 ಮಂದಿ ಪಂಜಾಬ್ ಮೂಲದರಾಗಿದ್ದು, ಮೃತದೇಹಗಳನ್ನು ಅವರವರ ಕುಟುಂಬ ಸದಸ್ಯರಿಗೆ ವಿ.ಕೆ. ಸಿಂಗ್ ಅವರು ಹಸ್ತಾಂತರ ಮಾಡಿದ್ದರು.
ಸಂತ್ರಸ್ತರ ಕುಟುಂಬಗಳಿಗೆ ರಾಜ್ಯ ಸರ್ಕಾರ ₹5 ಲಕ್ಷ ಪರಿಹಾರ, ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ತಿಳಿಸಿದ್ದರು.