ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ, ಗಾಳಿಗೆ ಮರ ಬಿದ್ದು ಮನೆಗೆ ಹಾನಿ

Last Updated 3 ಏಪ್ರಿಲ್ 2018, 13:13 IST
ಅಕ್ಷರ ಗಾತ್ರ

ಬಿಳಿಕೆರೆ: ಗ್ರಾಮದ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯರಾತ್ರಿ ಬಿರುಗಾಳಿ ಸಹಿತ ಮಳೆಗೆ ಮನೆಯೊಂದರ ಮೇಲೆ ಮರ ಬಿದ್ದು ಮನೆ ಚಾವಣಿ ಜಖಂಗೊಂಡಿದ್ದು, ಸಿಡಿಲಿಗೆ ತೆಂಗಿನ ಮರಗಳು ಸುಟ್ಟು ಹೋಗಿವೆ.ಸಿಡಿಲಿನ ರಭಸಕ್ಕೆ ಮರವು ಮಹದೇವ ಎಂಬುವವರ ಮನೆಯ ಮೇಲೆ ಬಿದ್ದು ಹೆಂಚುಗಳು ಹೊಡೆದು ಹೋಗಿವೆ. ದಿನಬಳಕೆಯ ವಸ್ತುಗಳಿಗೂ ಹಾನಿಯಾಗಿವೆ. ಈ ವೇಳೆ ಮನೆಯಲ್ಲಿ ಮಲಗಿದ್ದವರು ಸಣ್ಣಪುಟ್ಟ ಗಾಯಗಳಾಗಿವೆ.ಸಬ್ಬನಹಳ್ಳಿ ಗ್ರಾಮದ ರಾಜಪ್ಪ ಎಂಬುವವರ ತೋಟದಲ್ಲಿದ್ದ ಕೆಲ ತೆಂಗಿನ ಮರಗಳು ಸಿಡಿಲು ಬಡಿದು ಸುಟ್ಟು ಹೋಗಿವೆ.ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಮಹದೇವ್ ಅವರ ಮನೆಗೆ ಭೇಟಿ ನೀಡಿದರು. ಅಧಿಕಾರಿಗಳು ಬಂದು ಹಾನಿಯ ಬಗ್ಗೆ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT