ರಿಪ್ಪನ್ಪೇಟೆ: ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕುಸುಗುಂಡಿ–ಕಾರಕ್ಕಿ ಗ್ರಾಮದಲ್ಲಿ ನಿವೇಶನ ನೀಡುವಂತೆ ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿದ ನಿರಾಶ್ರಿತರು, ಬೇಡಿಕೆ ಈಡೇರಿಸದಿದ್ದರೆ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಗ್ರಾಮದ ಸರ್ವೆ ನಂಬರ್ 10–11ರಲ್ಲಿ 1992– 93ನೇ ಸಾಲಿನಲ್ಲಿ ನಿರಾಶ್ರಿತರಿಗೆ ಮನೆ, ನಿವೇಶನ ರಹಿತ 66 ಫಲಾನುಭವಿಗಳನ್ನು ಗುರುತಿಸಿ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೆ ನಡೆಸಿ, ನಕ್ಷೆ ಮತ್ತು ಚಕ್ಬಂದಿ, ಭೂ ಪರಿವರ್ತನೆ ಮಾಡಿ, ನಿವೇಶನಕ್ಕೆ ಗುರುತು ಹಾಕಿದ್ದರು. ಆದರೆ, ಇನ್ನೂ ಫಲಾನುಭವಿಗಳಿಗೆ ಜಾಗವನ್ನು ಗುರುತುಪಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.