<p><strong>ಬೆಂಗಳೂರು:</strong> ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಸ್ವಾತಂತ್ರ್ಯಾನಂತರ ಜನಸಾಮಾನ್ಯರಿಗಾಗಿ ದುಡಿದವರಲ್ಲಿ ಪ್ರಮುಖರಾದ ಕಮಲಾದೇವಿ ಚಟ್ಟೋಪಾಧ್ಯಾಯ ಅವರ 115ನೇ ಜನ್ಮದಿನ ಸಂದರ್ಭದಲ್ಲಿ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.</p>.<p>ದೇಶದ ಕಲೆ, ಸಂಗೀತ ವಿಸ್ತರಿಸಲು ಹಾಗೂ ಮಹಿಳೆಯ ಉನ್ನತಿಗಾಗಿ ಕಮಲಾದೇವಿ ಅವರು ನೀಡಿದ ಕೊಡುಗೆಯನ್ನು ವರ್ಣಚಿತ್ರಗಳ ಮೂಲಕ ಸ್ಮರಿಸಲಾಗಿದೆ.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ, ಹೋರಾಟದಿಂದ ಬಂಧನಕ್ಕೊಳಗಾದ ದೇಶದ ಮೊದಲ ಮಹಿಳಾ ಸತ್ಯಾಗ್ರಹಿ ಕಮಲಾದೇವಿ ಚಟ್ಟೋಪಾಧ್ಯಾಯ ಕರ್ನಾಟಕದ ಕರಾವಳಿಯವರು.</p>.<p>1903, ಏಪ್ರಿಲ್ 3ರಂದು ಮಂಗಳೂರಿನಲ್ಲಿ ಜನಿಸಿದ ಕಮಲಾದೇವಿ ಅವರಿಗೆ 14ನೇ ವಯಸ್ಸಿಗೆ ಮದುವೆ ನಡೆಯಿತು. ಎರಡೇ ವರ್ಷಗಳಲ್ಲಿ ವಿಧವೆಯಾದ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದರು. ಭಾರತಕ್ಕೆ ಮರಳಿದ ನಂತರ 1927ರಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸೇರ್ಪಡೆಯಾದರು.<br /> ಮಹಾತ್ಮ ಗಾಂಧಿ, ನೆಹರೂ, ಸರೋಜಿನಿ ನಾಯ್ಡು, ಇಂದಿರಾ ಗಾಂಧಿ ಅವರೊಂದಿಗೆ ನಿಕಟ ಸಂಪರ್ಕವಿದ್ದ ಕಮಲಾದೇವಿ ನಿರಾಶ್ರಿತರಿಗಾಗಿ ನೆರವಿನ ಹಸ್ತ ನೀಡುವಲ್ಲಿ, ಕೈಕರಕುಶಲ ಕಲೆಯನ್ನು ಉಳಿಸುವಲ್ಲಿ, ಮಹಿಳೆಯರಿಗಾಗಿ ಅಪಾರವಾದ ಕೆಲಸವನ್ನು ಮಾಡಿದ್ದಾರೆ.</p>.<p>ರಾಷ್ಟ್ರೀಯ ನಾಟಕ ಶಾಲೆ, ಸಂಗೀತ ನಾಟಕ ಅಕಾಡೆಮಿ ಸೇರಿ ಅನೇಕ ಸಂಸ್ಥೆಗಳ ಸ್ಥಾಪನೆಯಲ್ಲಿ ಕಮಲಾದೇವಿ ಶ್ರಮಿಸಿದ್ದಾರೆ.</p>.<p>ಸಮುದಾಯ ಅಭಿವೃದ್ಧಿ ಸೇವಾ ಕಾರ್ಯಗಳಿಗಾಗಿ ಭಾರತೀಯ ಸಹಕಾರ ಸಂಘದ ಸ್ಥಾಪಕಿ ಮತ್ತು ಅಧ್ಯಕ್ಷೆ ಕಮಲಾದೇವಿ ಚಟ್ಟೋಪಾಧ್ಯಾಯ ಅವರಿಗೆ 1966ರಲ್ಲಿ ರೇಮನ್ ಮ್ಯಾಗ್ಸೇಸೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ನಾಟಕ ಅಕಾಡೆಮಿ ಫೆಲೋಷಿಪ್(1974), ಪದ್ಮಭೂಷಣ(1955), ಪದ್ಮವಿಭೂಷಣ(1987) ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ಸ್ವಾತಂತ್ರ್ಯಾನಂತರ ಜನಸಾಮಾನ್ಯರಿಗಾಗಿ ದುಡಿದವರಲ್ಲಿ ಪ್ರಮುಖರಾದ ಕಮಲಾದೇವಿ ಚಟ್ಟೋಪಾಧ್ಯಾಯ ಅವರ 115ನೇ ಜನ್ಮದಿನ ಸಂದರ್ಭದಲ್ಲಿ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.</p>.<p>ದೇಶದ ಕಲೆ, ಸಂಗೀತ ವಿಸ್ತರಿಸಲು ಹಾಗೂ ಮಹಿಳೆಯ ಉನ್ನತಿಗಾಗಿ ಕಮಲಾದೇವಿ ಅವರು ನೀಡಿದ ಕೊಡುಗೆಯನ್ನು ವರ್ಣಚಿತ್ರಗಳ ಮೂಲಕ ಸ್ಮರಿಸಲಾಗಿದೆ.</p>.<p>ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ, ಹೋರಾಟದಿಂದ ಬಂಧನಕ್ಕೊಳಗಾದ ದೇಶದ ಮೊದಲ ಮಹಿಳಾ ಸತ್ಯಾಗ್ರಹಿ ಕಮಲಾದೇವಿ ಚಟ್ಟೋಪಾಧ್ಯಾಯ ಕರ್ನಾಟಕದ ಕರಾವಳಿಯವರು.</p>.<p>1903, ಏಪ್ರಿಲ್ 3ರಂದು ಮಂಗಳೂರಿನಲ್ಲಿ ಜನಿಸಿದ ಕಮಲಾದೇವಿ ಅವರಿಗೆ 14ನೇ ವಯಸ್ಸಿಗೆ ಮದುವೆ ನಡೆಯಿತು. ಎರಡೇ ವರ್ಷಗಳಲ್ಲಿ ವಿಧವೆಯಾದ ಅವರು ಉನ್ನತ ಶಿಕ್ಷಣಕ್ಕಾಗಿ ಲಂಡನ್ಗೆ ತೆರಳಿದರು. ಭಾರತಕ್ಕೆ ಮರಳಿದ ನಂತರ 1927ರಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸೇರ್ಪಡೆಯಾದರು.<br /> ಮಹಾತ್ಮ ಗಾಂಧಿ, ನೆಹರೂ, ಸರೋಜಿನಿ ನಾಯ್ಡು, ಇಂದಿರಾ ಗಾಂಧಿ ಅವರೊಂದಿಗೆ ನಿಕಟ ಸಂಪರ್ಕವಿದ್ದ ಕಮಲಾದೇವಿ ನಿರಾಶ್ರಿತರಿಗಾಗಿ ನೆರವಿನ ಹಸ್ತ ನೀಡುವಲ್ಲಿ, ಕೈಕರಕುಶಲ ಕಲೆಯನ್ನು ಉಳಿಸುವಲ್ಲಿ, ಮಹಿಳೆಯರಿಗಾಗಿ ಅಪಾರವಾದ ಕೆಲಸವನ್ನು ಮಾಡಿದ್ದಾರೆ.</p>.<p>ರಾಷ್ಟ್ರೀಯ ನಾಟಕ ಶಾಲೆ, ಸಂಗೀತ ನಾಟಕ ಅಕಾಡೆಮಿ ಸೇರಿ ಅನೇಕ ಸಂಸ್ಥೆಗಳ ಸ್ಥಾಪನೆಯಲ್ಲಿ ಕಮಲಾದೇವಿ ಶ್ರಮಿಸಿದ್ದಾರೆ.</p>.<p>ಸಮುದಾಯ ಅಭಿವೃದ್ಧಿ ಸೇವಾ ಕಾರ್ಯಗಳಿಗಾಗಿ ಭಾರತೀಯ ಸಹಕಾರ ಸಂಘದ ಸ್ಥಾಪಕಿ ಮತ್ತು ಅಧ್ಯಕ್ಷೆ ಕಮಲಾದೇವಿ ಚಟ್ಟೋಪಾಧ್ಯಾಯ ಅವರಿಗೆ 1966ರಲ್ಲಿ ರೇಮನ್ ಮ್ಯಾಗ್ಸೇಸೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ನಾಟಕ ಅಕಾಡೆಮಿ ಫೆಲೋಷಿಪ್(1974), ಪದ್ಮಭೂಷಣ(1955), ಪದ್ಮವಿಭೂಷಣ(1987) ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>