ಮಂಜೇಗೌಡ ಅವರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಸಕ್ತಿ ಹೊಂದಿದ್ದು, ಅವರಿಬ್ಬರ ಮಧ್ಯೆ ನಡೆದ ಮೊಬೈಲ್ ಸಂಭಾಷಣೆಯ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮಂಜೇಗೌಡ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆ ಬಾಕಿ ಇದೆ. ಈ ಕಾರಣಕ್ಕೆ ರಾಜೀನಾಮೆಗೆ ಕಾನೂನು ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ.