ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಸಂಸ್ಥೆಯ (ಸಿಕ್ರಂ) ಮಾರ್ಗರೇಟ್, ‘ಪೋಷಕರನ್ನು ಕೊಳ್ಳೆ ಹೊಡೆಯಲು ಖಾಸಗಿ ಶಾಲೆಗಳು ಪ್ರತಿ ದಿನ ಹೊಸ ತಂತ್ರಗಳನ್ನು ರೂಪಿಸುತ್ತಿವೆ. ಪ್ರತಿಷ್ಠಿತ ಶಾಲೆಯೊಂದು ಮಕ್ಕಳನ್ನು ಶಾಲೆಗೆ ದಾಖಲಿಸಕೊಳ್ಳಲು ಮಾತು ಮತ್ತು ಶ್ರವಣ ಪರೀಕ್ಷೆ ಮಾಡಿಸಿ ಪ್ರಮಾಣ ಪತ್ರ ತರಬೇಕು ಎಂದು ಹೇಳುತ್ತಿದೆ. ಇದು ನೇರವಾಗಿ ಮಕ್ಕಳ ಹಕ್ಕುಗಳ ಉಲ್ಲಂಘನೆ. ಈ ಬಗ್ಗೆ ತನಿಖೆ ಆಗಬೇಕು’ ಎಂದರು.