‘ಕಾವೇರಿ ನೀರು ಹಂಚಿಕೆ ಸಂಬಂಧ 6 ವಾರಗಳಲ್ಲಿ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಈ ಗಡುವಿನಲ್ಲಿ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದ್ದರಿಂದಲೇ ತಮಿಳುನಾಡಿನವರು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶವನ್ನು ದಿಕ್ಕರಿಸಿದೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಎರಡೂ ರಾಜ್ಯಗಳು ಸೌಹರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತಮಿಳುನಾಡಿನ ಸರ್ಕಾರದ ಮನೋಭಾವ ಇನ್ನೂ ಬದಲಾಗಿಲ್ಲ’ ಎಂದು ದೇವೇಗೌಡರು ಹೇಳಿದರು.