‘ಭೂಮಿಯನ್ನು ದೇವರೆಂದು ತಿಳಿಯಬೇಕು. ಉಪಯೋಗದೊಂದಿಗೆ ಸಂರಕ್ಷಣೆಯನ್ನೂ ಮಾಡಬೇಕು’ ಎಂದರು. ಅಧ್ಯಕ್ಷತೆ ವಹಿಸಿದ್ದ ರಾಜಾ ಲಖಮಗೌಡ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಲ್.ವಿ. ದೇಸಾಯಿ, ‘ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು. ಹೊಸ ಆವಿಷ್ಕಾರಗಳಿಗೆ ಆದ್ಯತೆ ಕೊಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ತಿಳಿದುಕೊಂಡು, ಕಾಪಾಡಬೇಕು’ ಎಂದರು. ಕಾಲೇಜಿನ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಗಿರೀಶ ಕತ್ತಿಶೆಟ್ಟಿ, ವಿಜಯಕುಮಾರ ಪಾಟೀಲ, ರಾಣಿ ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿರ್ದೇಶಕಿ ರತ್ನಪ್ರಭಾ ಬೆಲ್ಲದ ಮತ್ತು ಪ್ರೊ.ಯು.ಆರ್. ರಜಪೂತ ಅವರನ್ನು ಘಟಿಕೋತ್ಸವಕ್ಕೆ ಪ್ರಾಯೋಜಕತ್ವ ನೀಡಿದಕ್ಕಾಗಿ ಸನ್ಮಾನಿಸಲಾಯಿತು.