<p><strong>ತುಮಕೂರು: </strong>ಕಾಂಗ್ರೆಸ್ ಪಕ್ಷವು ದೇಶದ ಬಡವರ ಏಳಿಗೆಗೆ ಹೋರಾಟ ನಡೆಸಿದ್ದರೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದರು.</p>.<p>ನಗರದ ಭದ್ರಮ್ಮ ವೃತ್ತದಿಂದ ಟೌನ್ ಹಾಲ್ ವರೆಗೆ ರೋಡ್ ಶೋ ನಡೆಸಿದ ಅವರು ಟೌನ್ ಹಾಲ್ ವೃತ್ತ(ಬಿಜಿಎಸ್ ವೃತ್ತ)ದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.</p>.<p>ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿಯೊಬ್ಬರಿಗೆ 7 ಕೆ.ಜಿ ಅಕ್ಕಿ ಕೊಡುತ್ತಿದೆ. ಬಡವರಿಗಾಗಿ ಇಂತಹ ಅನೇಕ ಯೋಜನೆ ರೂಪಿಸಿ ಕೆಲಸ ಮಾಡುತ್ತಿದೆ ಎಂದರು.</p>.<p><em></em></p><p><em>(ತುಮಕೂರಿನಲ್ಲಿ ರೋಡ್ ಶೋಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು)</em></p><p>ಅದರೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದೆ. ನೀರವ್ ಮೋದಿ ₹30 ಸಾವಿರ ಕೋಟಿ, ವಿಜಯ್ ಮಲ್ಯ, ಲಲಿತ್ ಮೋದಿ ಅವರು ನೂರಾರು ಕೋಟಿ ಜನರ ದುಡ್ಡು ಲೂಟಿ ಹೊಡೆದಿದ್ದಾರೆ. ಅವರೆಲ್ಲ ದೇಶ ಬಿಟ್ಟು ಹೊರ ರಾಷ್ಟ್ರದಲ್ಲಿ ನೆಲೆಸಿದ್ದಾರೆ.</p><p>ರಾಜಸ್ಥಾನದ ಬಿಜೆಪಿ ಮುಖ್ಯಮಂತ್ರಿ ಮಗನಿಗೇ ಲಲಿತ್ ಮೋದಿ ಹಣ ಕೊಟ್ಟಿದ್ದಾನೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಮಗಳೇ ನೀರವ್ ಮೋದಿ ವಕೀಲೆಯಾಗಿದ್ದಾಳೆ. ಇದೆಲ್ಲವೂ ಬಿಜೆಪಿ ಭ್ರಷ್ಟರ ಪರವಾಗಿದೆ ಎಂಬುದಕ್ಕೆ ಉದಾಹರಣೆಗಳು ಎಂದು ವಾಗ್ದಾಳಿ ನಡೆಸಿದರು.</p><p><img alt="" src="https://cms.prajavani.net/sites/pv/files/article_images/2018/04/04/raod%20show.jpg" style="width: 600px; height: 400px;" data-original="/http://www.prajavani.net//sites/default/files/images/raod%20show.jpg"/></p><p>ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲವೂ ಗೊತ್ತಿದ್ದರೂ ಏನೂ ಕ್ರಮ ಜರುಗಿಸಿಲ್ಲ. ಇಂತಹವರು ಹೇಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿಯಾರು? ಎಂದು ಪ್ರಶ್ನಿಸಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಸಚಿವರಾದ ಡಿ.ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ವೇಣುಗೊಪಾಲ್ ಇದ್ದರು.</p></p></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕಾಂಗ್ರೆಸ್ ಪಕ್ಷವು ದೇಶದ ಬಡವರ ಏಳಿಗೆಗೆ ಹೋರಾಟ ನಡೆಸಿದ್ದರೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದರು.</p>.<p>ನಗರದ ಭದ್ರಮ್ಮ ವೃತ್ತದಿಂದ ಟೌನ್ ಹಾಲ್ ವರೆಗೆ ರೋಡ್ ಶೋ ನಡೆಸಿದ ಅವರು ಟೌನ್ ಹಾಲ್ ವೃತ್ತ(ಬಿಜಿಎಸ್ ವೃತ್ತ)ದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.</p>.<p>ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿಯೊಬ್ಬರಿಗೆ 7 ಕೆ.ಜಿ ಅಕ್ಕಿ ಕೊಡುತ್ತಿದೆ. ಬಡವರಿಗಾಗಿ ಇಂತಹ ಅನೇಕ ಯೋಜನೆ ರೂಪಿಸಿ ಕೆಲಸ ಮಾಡುತ್ತಿದೆ ಎಂದರು.</p>.<p><em></em></p><p><em>(ತುಮಕೂರಿನಲ್ಲಿ ರೋಡ್ ಶೋಗೂ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು)</em></p><p>ಅದರೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ಭ್ರಷ್ಟರ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದೆ. ನೀರವ್ ಮೋದಿ ₹30 ಸಾವಿರ ಕೋಟಿ, ವಿಜಯ್ ಮಲ್ಯ, ಲಲಿತ್ ಮೋದಿ ಅವರು ನೂರಾರು ಕೋಟಿ ಜನರ ದುಡ್ಡು ಲೂಟಿ ಹೊಡೆದಿದ್ದಾರೆ. ಅವರೆಲ್ಲ ದೇಶ ಬಿಟ್ಟು ಹೊರ ರಾಷ್ಟ್ರದಲ್ಲಿ ನೆಲೆಸಿದ್ದಾರೆ.</p><p>ರಾಜಸ್ಥಾನದ ಬಿಜೆಪಿ ಮುಖ್ಯಮಂತ್ರಿ ಮಗನಿಗೇ ಲಲಿತ್ ಮೋದಿ ಹಣ ಕೊಟ್ಟಿದ್ದಾನೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಮಗಳೇ ನೀರವ್ ಮೋದಿ ವಕೀಲೆಯಾಗಿದ್ದಾಳೆ. ಇದೆಲ್ಲವೂ ಬಿಜೆಪಿ ಭ್ರಷ್ಟರ ಪರವಾಗಿದೆ ಎಂಬುದಕ್ಕೆ ಉದಾಹರಣೆಗಳು ಎಂದು ವಾಗ್ದಾಳಿ ನಡೆಸಿದರು.</p><p><img alt="" src="https://cms.prajavani.net/sites/pv/files/article_images/2018/04/04/raod%20show.jpg" style="width: 600px; height: 400px;" data-original="/http://www.prajavani.net//sites/default/files/images/raod%20show.jpg"/></p><p>ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲವೂ ಗೊತ್ತಿದ್ದರೂ ಏನೂ ಕ್ರಮ ಜರುಗಿಸಿಲ್ಲ. ಇಂತಹವರು ಹೇಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಿಯಾರು? ಎಂದು ಪ್ರಶ್ನಿಸಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್, ಸಚಿವರಾದ ಡಿ.ಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ವೇಣುಗೊಪಾಲ್ ಇದ್ದರು.</p></p></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>