ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಶೀಟರ್‌ಗಳ ಪರೇಡ್, ಎಚ್ಚರಿಕೆ

Last Updated 4 ಏಪ್ರಿಲ್ 2018, 13:50 IST
ಅಕ್ಷರ ಗಾತ್ರ

ಹುಣಸೂರು: ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಸಮಾಜದ ಶಾಂತಿ– ಸುವ್ಯವಸ್ಥೆಗೆ ಭಂಗ ಬಾರದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ರೌಡಿಶೀಟರ್‌ಗಳಿಗೆ ಸಿಪಿಐ ಗಂಗಾಧರಪ್ಪ ಎಚ್ಚರಿಕೆ ನೀಡಿದರು.ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ರೌಡಿಶೀಟರ್‌ ಪರೇಡ್‌ನಲ್ಲಿ ಅವರು ಮಾತನಾಡಿದರು.ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿ ಕೊಂಡು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸದಲ್ಲಿ ತೊಡಗಿದರೆ ಕಠಿಣ ಕ್ರಮ ತೆಗೆದುಕೊಳ್ಳ ಲಾಗುವುದು. ಇತರರ ಮಾತಿನ ಮಣೆಗೆ ಬಲಿಯಾಗಿ ತೊಂದರೆಗೆ ಸಿಲುಕಬೇಡಿ. ನ್ಯಾಯಾಲಯದಲ್ಲಿ ನಡೆದಿರುವ ವಿಚಾರಣೆಗೆ ಹಾಜರಾಗಿ ಪ್ರಕರಣದಿಂದ ಹೊರ ಬಂದು ಇತರರಂತೆ ಜೀವನ ರೂಪಿಸಿಕೊಳ್ಳಿ ಎಂದರು.ಚುನಾವಣಾ ಘರ್ಷಣೆಗಳಲ್ಲಿ ಗುರುತಿಸಿಕೊಂಡು ವಾರೆಂಟ್ ಪಡೆದಲ್ಲಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಸಾಧ್ಯವಾದಷ್ಟು ಒಳ್ಳೆಯವರಂತೆ ನಡೆದು ಕೊಂಡು ರೌಡಿಶೀಟರ್‌ ಪಟ್ಟಿಯಿಂದ ಹೊರಬನ್ನಿ ಎಂದು ಸಲಹೆ ನೀಡಿದರು.ಪಿ.ಎಸ್‌.ಐ ಮಹೇಶ್‌ ಮತ್ತು ಆನಂದ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT