ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ನೆರವೇರಿಸಿದರು. ಅಭಯ ಆಂಜನೇಯ ಏಕಶಿಲಾ ಮೂರ್ತಿಯನ್ನು ಬಿಡದಿ ಸಮೀಪದ ದಾಸಪ್ಪನದೊಡ್ಡಿ ಶಿಲ್ಪಕಲಾ ಕೇಂದ್ರದಲ್ಲಿ ಕೆತ್ತಲಾಗಿದೆ. ಶಿಲ್ಪಿ ಅಶೋಕ್ ಗುಡಿಗಾರ್ ಅವರು 10 ಶಿಲ್ಪಿಗಳ ನೆರವಿನೊಂದಿಗೆ ಆರು ತಿಂಗಳಲ್ಲಿ ಮೂರ್ತಿ ಕೆತ್ತನೆ ಮಾಡಿದ್ದಾರೆ.