ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರನಟರ ವಿರುದ್ಧ ಕೃಷ್ಣಮೃಗ ಬೇಟೆ ಆರೋಪ: ತೀರ್ಪು ಇಂದು

Last Updated 4 ಏಪ್ರಿಲ್ 2018, 20:36 IST
ಅಕ್ಷರ ಗಾತ್ರ

ಜೋಧಪುರ: ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ದಾಖಲಾಗಿರುವ ಕೃಷ್ಣಮೃಗಗಳ ಬೇಟೆ ಪ್ರಕರಣದ ತೀರ್ಪನ್ನು ಇಲ್ಲಿಯ ಕೋರ್ಟ್ ಗುರುವಾರ (ಏ.5)  ಪ್ರಕಟಿಸಲಿದೆ.

‘1998ರಲ್ಲಿ ಸಿನಿಮಾ ಒಂದರ ಚಿತ್ರೀಕರಣದ ವೇಳೆ ಸಮೀಪದ ಕಂಕಣಿ ಗ್ರಾಮದಲ್ಲಿ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು. ಈ ಬೇಟೆಗೆ ಪರವಾನಗಿ ಇಲ್ಲದ ಬಂದೂಕು ಬಳಕೆ ಮಾಡಲಾಗಿತ್ತು’ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ, ‘ಅಕ್ರಮ ಶಸ್ತ್ರಾಸ್ತ್ರ ಬಳಕೆ’ ಕಾಯ್ದೆ ಅಡಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಳೆದ ಮಾರ್ಚ್‌ 28ರಂದು ವಾದ–ಪ್ರತಿವಾದ ಮುಗಿಸಿದ್ದ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು.

ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಮಾಡಲಾಗಿದೆ. ಇವರು ಕೂಡ ಸಲ್ಮಾನ್‌ ಜೊತೆ ತೀರ್ಪು ಪ್ರಕಟಣೆಯ ಸಮಯದಲ್ಲಿ ಕೋರ್ಟ್‌ನಲ್ಲಿ ಹಾಜರಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT