ಸಾಹಿತಿ ದೇವನೂರ ಮಹಾದೇವ ಮಾತನಾಡಿ, ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ 25 ಮಂದಿ ಪ್ರಾಮಾಣಿಕರು ಸಿಕ್ಕರೆ ಅದು ನಮ್ಮ ಪಾಲಿನ ಪುಣ್ಯ. ಪ್ರಾಮಾಣಿಕರನ್ನು ಆಯ್ಕೆ ಮಾಡುವ ಮೂಲಕ ಹಣಕ್ಕಾಗಿ ನಡೆಯುತ್ತಿರುವ ರಾಜಕಾರಣಕ್ಕೆ ಇತಿಶ್ರೀ ಹಾಡಿ ಜನರಿಂದ ಜನರಿಗಾಗಿ ರಾಜಕಾರಣಕ್ಕೆ ನಾಂದಿ ಹಾಡಬೇಕು ಎಂದು ಮನವಿ ಮಾಡಿದರು.