ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅಥವಾ ತಿದ್ದುಪಡಿ ಮಾಡಲು ಸಬೂಬು ಹೇಳಿ ಕಾಲಹರಣ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧಿಕಾರಿಗಳಿಗೆ ಎಚ್ಚರಿಕ ನೀಡಿದರು.ಜಿಲ್ಲಾಡಳಿತ, ಚುನಾವಣಾ ಆಯೋಗದಿಂದ ಬಾಬೂ ಜಗಜೀವನರಾಂ ಭವನದಲ್ಲಿ ಬುಧವಾರ ಬಿಎಲ್ಒಗಳ ಪುನಶ್ಚೇತನ ಕಾರ್ಯಾಗಾರ ಹಾಗೂ ಮಿಂಚಿನ ಮತದಾರರ ನೋಂದಣಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಧಿಕಾರಿಗಳು ಒತ್ತಡ, ಆಮಿಷಕ್ಕೆ ಒಳಗಾಗದೆ ಕಾರ್ಯ ನಿರ್ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಗಮನಕ್ಕೆ ತರಬೇಕು. ಚುನಾವಣಾ ಆಯೋಗದ ನಿಮಯಗಳಿಗೆ ಅನುಸಾರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.