<p><strong>ಹಾಸನ: </strong>ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.</p>.<p>ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.</p>.<p>‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್ನೊಂದಿಗೆ ಶಾಮೀಲಾಗಿದೆ’ ಎಂದು ಆರೋಪಿಸಿದರು.</p>.<p>ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.</p>.<p>‘ನಮ್ಮ ಪಕ್ಷದ ಸಮಾವೇಶಕ್ಕೆ ಸಾರಿಗೆ ಬಸ್ಸುಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್ಸುಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.</p>.<p>‘ಕಾಂಗ್ರೆಸ್ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೇ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>ಕೆಲವೆಡೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.</p>.<p>ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.</p>.<p>‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್ನೊಂದಿಗೆ ಶಾಮೀಲಾಗಿದೆ’ ಎಂದು ಆರೋಪಿಸಿದರು.</p>.<p>ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.</p>.<p>‘ನಮ್ಮ ಪಕ್ಷದ ಸಮಾವೇಶಕ್ಕೆ ಸಾರಿಗೆ ಬಸ್ಸುಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್ಸುಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.</p>.<p>‘ಕಾಂಗ್ರೆಸ್ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೇ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>ಕೆಲವೆಡೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>