ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಕಾಮಗಾರಿ ಆರೋಪ

Last Updated 5 ಏಪ್ರಿಲ್ 2018, 11:03 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ಇಲ್ಲಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾಮಗಾರಿ ಕಳಪೆಯಿಂದ ಕೂಡಿದೆ. ಅಧಿಕಾರಿಗಳು ಮತ್ತು ಗುತ್ತಿಗೆ ದಾರರು ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಚೇರಿ ಮುಂಭಾಗದ ದಕ್ಷಿಣ ದಿಕ್ಕಿನಲ್ಲಿ ಉತ್ತಮ ಸ್ಥಿತಿಯಲ್ಲಿರುವ ಕಾಂಪೌಂಡ್ ಮತ್ತು ಗೇಟ್ ಇದ್ದರೂ ಹಣ ಮಾಡುವ ಉದ್ದೇಶದಿಂದ ಈ ಕಾಮಗಾರಿ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಈ ಕಾಮಗಾರಿ ನೋಡಿಕೊಳ್ಳುತ್ತಿ ರುವ ಕಿರಿಯ ಎಂಜಿನಿಯರ್ ಜಾಕಬ್, ಇದು ಕೇವಲ ₹ 2 ಲಕ್ಷದ ಕಾಮಗಾರಿ ಎಂದು ಹೇಳಿದರೆ, ಎಇಇ ಮಹೇಶ್ ಒಟ್ಟು ₹ 10 ಲಕ್ಷದ ಕಾಮಗಾರಿಯಲ್ಲಿ ₹ 5 ಲಕ್ಷದ ಕಾಮಗಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.‘ಎಂಜಿನಿಯರ್ ₹ 2 ಲಕ್ಷದ ಕಾಮಗಾರಿ ಎಂದರೆ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದರಾಜು ₹ 3 ಲಕ್ಷದ ಕಾಮಗಾರಿ ಎಂದು ಹೇಳುತ್ತಾರೆ. ಎಇಇ ಅವರಿಗೆ ಕೇಳಿದರೆ ₹ 5 ಲಕ್ಷ ಎಂದು ಹೇಳುತ್ತಾರೆ. ಇದರಲ್ಲಿ ಯಾವುದು ಸತ್ಯ’ ಎಂದು ಸ್ಥಳೀಯ ಮಹೇಶ್ ಪ್ರಶ್ನಿಸಿದ್ದಾರೆ.‘ಎಲ್ಲಾ ಕೆಲಸವನ್ನೂ ನಾವು ನೋಡಲಾಗುವುದಿಲ್ಲ. ಮೇಲ್ನೋಟಕ್ಕೆ ಕಾಮಗಾರಿ ಉತ್ತಮವಾಗಿದೆ’ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT