ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್(52)ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ಪ್ರಕಟಿಸಿದ್ದು, ತೀರ್ಪಿನ ಕುರಿತು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
19 ವರ್ಷ ಹಿಂದಿನ ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಸಲ್ಮಾನ್ಖಾನ್ಗೆ ಗುರುವಾರ ಶಿಕ್ಷೆ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಇದು ಬೇಸರದ ಸಂಗತಿ. ಅವರು ಅನೇಕ ಜನೋಪಕಾರಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಬಿಡುಗಡೆ ನೀಡಬೇಕು’ ಎಂದಿದ್ದಾರೆ.