ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಅಕ್ರಮ ನಡೆಸಲು ಗೃಹ ಇಲಾಖೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ನಾನು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ, ದೇವೇಗೌಡರೇ ಹಿಂದೆ ಆ ಕೆಲಸ ಮಾಡಿರಬಹುದು’ ಎಂದು ತಿರುಗೇಟು ನೀಡಿದ್ದಾರೆ.