ನವದೆಹಲಿ: ಸಂಸತ್ನ ಬಜೆಟ್ ಅಧಿವೇಶನದ 23 ದಿನಗಳ ಕಲಾಪ ವ್ಯರ್ಥವಾಗಿರುವುದರಿಂದ ಎನ್ಡಿಎ ಮೈತ್ರಿಕೂಟದ ಸಂಸದರು ಅಷ್ಟೂ ದಿನಗಳ ವೇತನ ತ್ಯಜಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಹೇಳಿದ್ದರು. ಆದರೆ, ಈ ಕುರಿತು ನಮಗೆ ಮಾಹಿತಿ ಇಲ್ಲ. ನಮ್ಮ ಬಳಿ ಚರ್ಚಿಸದೆ ಬಿಜೆಪಿ ನಿರ್ಧಾರ ಕೈಗೊಂಡಿದೆ ಎಂದು ಎನ್ಡಿಎ ಮಿತ್ರಪಕ್ಷಗಳಾದ ‘ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್ಎಲ್ಎಸ್ಪಿ)’ ಮತ್ತು ಶಿವಸೇನಾ ಹೇಳಿವೆ.