ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್ ಮಾತನಾಡಿ, ವಿದ್ಯಾವಂತ ಸಮುದಾಯ ಮತದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಪೂರಕವಾದ ಅಂಶಗಳತ್ತ ಗಮನ ಸೆಳೆಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ವ್ಯಕ್ತಿ ಸ್ವಾತಂತ್ರ್ಯ ಇರುತ್ತದೆ. ಇದನ್ನು ಮತದಾರರು ಮನಗಾಣಬೇಕು. ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಹೇಳಿದರು.