‘ಆದಾಯ ಮತ್ತು ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ 44 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ನಾವು ಹೆಚ್ಚುವರಿಯಾಗಿ ಪಾವತಿಸಿದ ತೆರಿಗೆ ಹಣ ಇಲಾಖೆ ಬಡ್ಡಿ ಸಮೇತ ವಾಪಸ್ ನೀಡಿದೆ. ನಮ್ಮಿಂದ ವಶಪಡಿಸಿಕೊಂಡಿದ್ದ ಭೂಮಿ ಬಿಟ್ಟುಕೊಡುವುದಾಗಿ ತಿಳಿಸಿದೆ’ ಎಂದು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಈ ವಿವಾದಕ್ಕೆ ಸಂಬಂಧಿಸಿದಂತೆ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಸುದೀರ್ಘ ಕಾಲ ಕಾನೂನು ಹೋರಾಟ ನಡೆಸಿದ್ದರು. ಅವರು ಇದ್ದಾಗಲೇ ಪ್ರಕರಣ ಇತ್ಯರ್ಥಗೊಂಡಿದ್ದರೆ ಚೆನ್ನಾಗಿತ್ತು ಎಂದು ಭಾವುಕರಾದರು.